Namma Haveri 24X7 News

Bureau Report

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಮರೀಚಿಕೆ, ಜನರ ದಾರಿ ತಪ್ಪಿಸಲು ಸಿಎಂ ಬದಲಾವಣೆ ಡ್ರಾಮಾ – ಎಚ್ ಡಿ ಕುಮಾರಸ್ವಾಮಿ

ಹಾವೇರಿ : ರಾಜ್ಯದಲ್ಲಿ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡುವರೆ ವರ್ಷ ತುಂಬಿರುವಾಗಲೇ ರಾಜ್ಯದಲ್ಲಿ ಅಭಿವೃದ್ಧಿಕಾರ್ಯಗಳು ಮರೆಮಾಚಿಕೆ ಈ ವಿಷಯ ಮರೆಮಾಚಲು ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮುನ್ನೆಲೆಗೆ ತಂದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸರಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಅವರು ಮಾಧ್ಯಮಗಳ ಜೊತೆ ಮಾತನಾಡಿ ರಾಜ್ಯದಲ್ಲಿ ಜಾರಿಯಲ್ಲಿರುವ ಐದು ಗ್ಯಾರಂಟಿಗಳಿಂದ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲ ಇದರಿಂದ ಅಭಿವೃದ್ಧಿ ಕಾರ್ಯಗಳು ನೆಲಕಚ್ಚಿವೆ ಎಂದು ಸರ್ಕಾರಕ್ಕೆ ತಿವಿಯುವುದರ ಮೂಲಕ ಎಚ್ಚರಿಸಿದ್ದಾರೆ.
ಹೀಗಿರುವಾಗ ರಾಜ್ಯದ ಅಭಿವೃದ್ಧಿ ಕಡೆ ಗಮನಹರಿಸುವ ಬದಲು ಸಿಎಂ ಕುರ್ಚಿಯ ಕಿತ್ತಾಟಕ್ಕಾಗಿ ಪ್ರತಿದಿನ ಚರ್ಚೆ ನಡೆಯುತ್ತಿರುವುದು ರಾಜ್ಯದ ಜನರನ್ನ ದಿಕ್ಕು ತಪ್ಪಿಸುವ ತಂತ್ರಗಾರಿಕೆ ಎಂಬ ಅನುಮಾನ ಮೂಡುವಂತಾಗಿದೆ ಎಂಬ ಗಂಭೀರ ಆರೋಪವನ್ನು ಸರ್ಕಾರದ ಮೇಲೆ ಮಾಡಿದ್ದಾರೆ.
ಸಮೀಕ್ಷೆ ಹೆಸರಲ್ಲಿ ಜಾತಿ ಧರ್ಮಗಳನ್ನ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದು, ಆರ್ ಎಸ್ ಎಸ್ ಬ್ಯಾನ್ ವಿಚಾರ, ಮುಖ್ಯಮಂತ್ರಿ ಬದಲಾವಣೆ ಹೀಗೆ ಹತ್ತು ಹಲವಾರು ಅನಾವಶ್ಯಕ ವಿಷಯಗಳನ್ನು ಚರ್ಚೆ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ಸರ್ಕಾರಕ್ಕೆ ಚಾಟಿ ಬಿಸಿ ಎಚ್ಚರಿಸಿದ್ದಾರೆ. ಇನ್ನು ಮುಂದೆ ಆದರೂ ಸರಕಾರ ಎಚ್ಚೆತ್ತುಕೊಂಡು ಅಭಿವೃದ್ಧಿ ಕಾರ್ಯ ಕಡೆ ಗಮನಹರಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

News Updates

ಹಾವೇರಿ ಜಿಲ್ಲೆ ರಟ್ಟೀಹಳ್ಳಿ ಪಟ್ಟಣದಲ್ಲಿ ಡ್ಯಾಪ್ಕೋ ವತಿಯಿಂದ ನಡೆದ ಜಿಲ್ಲಾ ಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಾಥಾನ್ ಸ್ಪರ್ಧೆಯಲ್ಲಿ ಪುರುಷ ವಿಭಾಗದಲ್ಲಿ ಆರ್ ಟಿ ಇ ಎಸ್ ಕಾಲೇಜ ಪ್ರಥಮ ವಾದರೆ, ಮಹಿಳಾ ವಿಭಾಗದಲ್ಲಿ ರಾಣೇಬೆನ್ನೂರ್ ನ ಆರ್. ಆರ್ ಕಾಲೇಜು ಜಿಲ್ಲೆ ಗೆ ಪ್ರಥಮ.

News Updates

ಆರ್. ಎಸ್.ರಾಮನಗೌಡ್ರ ಸಾರಥ್ಯದಲ್ಲಿ.

ನಮ್ಮ ಹಾವೇರಿ 24X7

haveriexpress78@gmail.com
Contact: 7892724924